September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ ಗ್ರಂಥಪಾಲಕರಿಗೆ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ “Library Vision 2026 – Towards Systematic and Efficient Libraries” ಎಂಬ ಶೀರ್ಷಿಕೆಯಡಿ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಗ್ರಂಥಪಾಲಕರಿಗಾಗಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಉಜಿರೆಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಗ್ರಂಥಾಲಯಗಳ ಕಾರ್ಯವೈಖರಿಯನ್ನು ವ್ಯವಸ್ಥಿತಗೊಳಿಸುವುದು, ಪರಿಣಾಮಕಾರಿಯಾಗಿ ನಿರ್ವಹಿಸುವುದು ಹಾಗೂ ಆಧುನಿಕ ಗ್ರಂಥಾಲಯ ವ್ಯವಸ್ಥೆಗಳ ಕುರಿತು ಗ್ರಂಥಪಾಲಕರಿಗೆ ಅಗತ್ಯವಾದ ಮಾರ್ಗದರ್ಶನ ನೀಡುವುದು ಪ್ರಮುಖ ಉದ್ದೇಶವಾಗಿತ್ತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ. ಐ.ಟಿ. ಕಾಲೇಜಿನ ಉಜಿರೆಯ ಮುಖ್ಯ ಗ್ರಂಥಪಾಲಕರಾದ ಡಾ. ರಾಜತಾ ಪಿ. ಶೆಟ್ಟಿ ಭಾಗವಹಿಸಿ, ವ್ಯವಸ್ಥಿತ ಹಾಗೂ ಪರಿಣಾಮಕಾರಿ ಗ್ರಂಥಾಲಯಗಳ ನಿರ್ಮಾಣ, ಗ್ರಂಥಾಲಯ ನಿರ್ವಹಣೆಯ ವಿವಿಧ ಆಯಾಮಗಳು ಹಾಗೂ ಉತ್ತಮ ಗ್ರಂಥಾಲಯ ಸೇವೆಗಳ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಕರ ಸಂಘದಿಂದ ಮಂಗಳೂರು ವಿಭಾಗ ಮಟ್ಟದ ‘ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ’ ಪಡೆದ ಹಿನ್ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿ ಡಾ. ರಾಜತಾ ಪಿ. ಶೆಟ್ಟಿ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಕಾರ್ಯಾಗಾರದಲ್ಲಿ AICS ಸಂಸ್ಥೆಗಳ ಗ್ರಂಥಪಾಲಕರು ಭಾಗವಹಿಸಿ, ಗ್ರಂಥಾಲಯ ನಿರ್ವಹಣೆಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡರು. ಕಾರ್ಯಾಗಾರವು ಗ್ರಂಥಪಾಲಕರ ವೃತ್ತಿಪರ ಜ್ಞಾನವನ್ನು ವೃದ್ಧಿಸುವುದರೊಂದಿಗೆ ಶಾಲಾ ಗ್ರಂಥಾಲಯಗಳನ್ನು ಇನ್ನಷ್ಟು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ರೂಪಿಸಲು ಸಹಕಾರಿಯಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸವಿತಾ ವೇದಪ್ರಕಾಶ್ ಸ್ವಾಗತಿಸಿದರು. ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

“ವ್ಯವಸ್ಥಿತ ಗ್ರಂಥಾಲಯವೇ ಜ್ಞಾನಪೂರ್ಣ ಕಲಿಕೆಯ ಬಾಗಿಲು” ಎಂಬ ಆಶಯದೊಂದಿಗೆ ನಡೆದ ಕಾರ್ಯಾಗಾರವು ಯಶಸ್ವಿಯಾಗಿ ನೆರವೇರಿತು.

Related posts

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya
error: Content is protected !!