September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಕಕ್ಯ ಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಸೆ.16 ರಂದು ಪದವಿಪೂರ್ವ ಹಾಗೂ ಪದವಿ ವಿಭಾಗದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮ ಹಾಗೂ ಗೌರವದಿಂದ ಏರ್ಪಡಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಹಾಗೂ ಸಂಯೋಜಕರಾದ ಯಶವಂತ್ ಜಿ.ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿ, ಅಧೀಕೃತ ಚಾಲನೆ ನೀಡಿದರು.  ಸಂಸ್ಥೆಯ ಪ್ರಾಂಶುಪಾಲರಾದ  ಜೋಸ್ಟನ್ ಲೋಬೊ ಮಾತನಾಡಿ  ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾತುಗಳನ್ನು ತಿಳಿಸಿದರು. ಹಾಗೂ ಜೀವನದಲ್ಲಿ ಶಿಸ್ತು ಪರಿಶ್ರಮ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಸಲಹೆಯನ್ನು ನೀಡಿ ಶುಭಾಶಯ ತಿಳಿಸಿದರು.
ಸಂಯೋಜಕರಾದ ಯಶವಂತ ಜಿ ನಾಯಕ್ ಮಾತನಾಡಿ ಶಿಕ್ಷಣದ ಮಹತ್ವ ಹಾಗೂ ಶಿಕ್ಷಕರ ಬಾಂಧವ್ಯದ ಕುರಿತು ಮತ್ತು ಸಂಸ್ಥೆಯಲ್ಲಿ ದುಡಿಯುವ ಶಿಕ್ಷಕರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.
ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಎಸ್, ಪದವಿಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಚೈತ್ರಾ ಎ.ವಿ, ಜಯಾಶ್ರೀ , ಕನ್ನಡ ಉಪನ್ಯಾಸಕಿ ವಿಂದ್ಯಾಶ್ರೀ ಎ ಇವರೆಲ್ಲರೂ ಮಾತನಾಡಿ ವೃಕ್ತಿತ್ವ ,ಆದರ್ಶ ಹಾಗೂ ತತ್ವಗಳನ್ನು ವಿದ್ಯಾರ್ಥಿಗಳೆಲ್ಲರೂ ಮೈಗೂಡಿಸಿಕೊಂಡು ಶಿಕ್ಷಕರನ್ನು ಸದಾ ಗೌರವದಿಂದ ಕಾಣಬೇಕು ಎಂದು ಹಿತನುಡಿಗಳನ್ನಾಡಿದರು.


ಪ್ರಥಮ ಪದವಿ ವಿಭಾಗದ ಅನನ್ಯ ಸ್ವಾಗತಿಸಿ, ದ್ವಿತೀಯಾ ಪಿ.ಯು.ಸಿ ಚೈತ್ರಾ ಯು.ಎಸ್ ವಂದಿಸಿ , ಅಂತಿಮ ಪದವಿ ವಿಭಾಗದ ರಾಫಿಯಾ ಹಾಗೂ ಅಝ್ಮಿಯಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya
error: Content is protected !!