September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಬ್ಯಾಂಕಿಂಗ್ ಹಾಗೂ ಕೌಶಲ್ಯ ತರಬೇತಿ ಮಾಹಿತಿ ಶಿಬಿರ

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸುನಿಧಿ ಫೌಂಡೇಷನ್ ಟ್ರಸ್ಟ್ ಹಾಗೂ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಶಿಬಿರ ಬೆಳ್ತಂಗಡಿ ಅಂಬೇಡ್ಕರ ಭವನದಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಇವರು ” ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಮಾಹಿತಿ ಇಂದಿನ ಕಾಲದಲ್ಲಿ ಅವಶ್ಯವಾಗಿದ್ದು, ಹೆಚ್ಚಿನ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದು ಕರೆ ನೀಡಿದರು.

ಮಂಗಳೂರಿನ ಗೌತಮ್ ಇವರು ಬ್ಯಾಂಕಿಂಗ್ ಸಾಲ ಸೌಲಭ್ಯ , ಕೃಷಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀನಾಕ್ಷಿ ಇವರು ಆರಿ ಕೌಶಲ್ಯ ತರಬೇತಿ ಯೊಜನೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿನೀತ್, KSTA ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಲಯ ಸಮಿತಿ ಉಪಾಧ್ಯಕ್ಷ ಹರೀಶ್ ಹರ್ಷ, ತಾಲೂಕು ಸಮಿತಿ ಉಪಾಧ್ಯಕ್ಷ ವಸಂತ ಸ್ವಾತಿ, ಮಾಜಿ ವಲಯ ಸಮಿತಿ ಅಧ್ಯಕ್ಷ ಹರೀಶ್ ಗಜಾನನ
ತರಗತಿಯಲ್ಲಿ ಭಾಗವಹಿಸುವ 47 ಮಂದಿ ಭಾಗವಹಿಸಿದರು . ಜಿ.ವಿ. ಹರೀಶ್ ನಿರೂಪಿಸಿ, ಸುರೇಖಾ ಸ್ವಾಗತಿಸಿದರು. ಶ್ರೀಮತಿ ಶಶಿಕಲಾ ಧನ್ಯವಾದಗೈದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya
error: Content is protected !!