ಮಡಂತ್ಯಾರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಆಯುಷ್ಯ ಆರೋಗ್ಯ ಕೋರಿ ಮಡಂತ್ಯಾರಿನ ಶ್ರೀ ಗಣೇಶೋತ್ಸವದ ಗಣಪತಿ ಮಂಟಪದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಶಕ್ತಿ ಕೇಂದ್ರದ ಪ್ರಮುಖರಾದ ಕಾಂತಪ್ಪ ಗೌಡ, ಪಕ್ಷದ ಪ್ರಮುಖರಾದ ವಿಶ್ವನಾಥ್ ಪೂಜಾರಿ, ತಾಲೂಕು ಮಹಿಳಾ ಮೋರ್ಚಾದ ಕೋಶಾಧಿಕಾರಿ ಸಂಗೀತ ಶೆಟ್ಟಿ ಹಾಗೂ ಪಾರೆಂಕಿ ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು.











