ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸುನಿಧಿ ಫೌಂಡೇಷನ್ ಟ್ರಸ್ಟ್ ಹಾಗೂ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಮಾಹಿತಿ ಶಿಬಿರ ಬೆಳ್ತಂಗಡಿ ಅಂಬೇಡ್ಕರ ಭವನದಲ್ಲಿ ನಡೆಯಿತು.
ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಇವರು ” ಮಹಿಳೆಯರಿಗೆ ಕೌಶಲ್ಯ ತರಬೇತಿ ಹಾಗೂ ಬ್ಯಾಂಕಿಂಗ್ ಮಾಹಿತಿ ಇಂದಿನ ಕಾಲದಲ್ಲಿ ಅವಶ್ಯವಾಗಿದ್ದು, ಹೆಚ್ಚಿನ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದು ಕರೆ ನೀಡಿದರು.

ಮಂಗಳೂರಿನ ಗೌತಮ್ ಇವರು ಬ್ಯಾಂಕಿಂಗ್ ಸಾಲ ಸೌಲಭ್ಯ , ಕೃಷಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೀನಾಕ್ಷಿ ಇವರು ಆರಿ ಕೌಶಲ್ಯ ತರಬೇತಿ ಯೊಜನೆ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ವಿನೀತ್, KSTA ಬೆಳ್ತಂಗಡಿ ವಲಯದ ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ವಲಯ ಸಮಿತಿ ಉಪಾಧ್ಯಕ್ಷ ಹರೀಶ್ ಹರ್ಷ, ತಾಲೂಕು ಸಮಿತಿ ಉಪಾಧ್ಯಕ್ಷ ವಸಂತ ಸ್ವಾತಿ, ಮಾಜಿ ವಲಯ ಸಮಿತಿ ಅಧ್ಯಕ್ಷ ಹರೀಶ್ ಗಜಾನನ
ತರಗತಿಯಲ್ಲಿ ಭಾಗವಹಿಸುವ 47 ಮಂದಿ ಭಾಗವಹಿಸಿದರು . ಜಿ.ವಿ. ಹರೀಶ್ ನಿರೂಪಿಸಿ, ಸುರೇಖಾ ಸ್ವಾಗತಿಸಿದರು. ಶ್ರೀಮತಿ ಶಶಿಕಲಾ ಧನ್ಯವಾದಗೈದರು.











