32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಶ್ವೇತ ಸಮೂಹ ‘ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ  ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ  ಸಹಕಾರಿ ಸಂಘದ 2025- 26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷೆ ಚೈತ್ರಾ ಯಂ. ಜಿ.ಅವರ ಅಧ್ಯಕ್ಷತೆಯಲ್ಲಿ   ಸೆ. 18 ರಂದು ಪಿಲಿಗೂಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷೆ ಚೈತ್ರಾ ಯಂ. ಜಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದಲ್ಲಿ 2700 ಲೀಟರ್ ಹಾಲು ಸಂಗ್ರಹಣೆ ಆಗುತ್ತಿದ್ದು, ಲೆಕ್ಕ ಪರಿಶೋಧನೆಯಲ್ಲಿ ಎ ಗ್ರೇಡ್ ಪಡೆದಿದ್ದು, ವರದಿ ಸಾಲಿನಲ್ಲಿ 7.69 ಲಕ್ಷ ಲೀಟರ್ ಹಾಲು ಸಂಗ್ರಹಣೆಗೊಂಡು   ರೂ.  1418892.60 ಲಕ್ಷ ನಿವ್ವಳ ಲಾಭ ಗಳಿಸಿ, ಸದಸ್ಯರಿಗೆ ಲೀಟರ್ ಗೆ 0.88  ಪೈಸೆ ಬೋನಸ್ ನೀಡಲಾಗುವುದು ಎಂದು ಹೇಳಿದರು.

ವಿಸ್ತರಣಾಧಿಕಾರಿ ರಾಜೇಶ್ ಪಿ. ಕಾಮತ್ ಮಾರ್ಗದರ್ಶನ ನೀಡಿ ತಾಲೂಕಿನ ಎರಡನೇ ಅತಿ ದೊಡ್ಡ ಮಾಹಿಳಾ ಸಂಘದಲ್ಲಿ 2.5 ಸಾವಿರ ಲೀಟರ್ ಹಾಲು ಸಂಗ್ರಹಣೆ ಆಗುತ್ತಿರುವುದು ಗಮನಹ ಇಲ್ಲಿನ ಸಂಘದ ಸದಸ್ಯೆ ಜಮೀಲಾ ಅವರು ರಾಜ್ಯಮಟ್ಟದಲ್ಲಿ ಗುರುತಿಸಿರುವುದು ಸಂಘವು ಜನಜ್ಜನಿತವಾಗಿದೆ. ಸಂಘದ ಪ್ರಗತಿ ಪಥದಲ್ಲಿ ಸಾಗುತ್ತಿದ್ದು ಎಂದು ಹೇಳಿದ ಅವರು ಸಂಘದ ಕಾರ್ಯ ವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಸ್ಥಾಪಕಾಧ್ಯಕ್ಷೆ ರಾಜಶ್ರೀ ಹೆಗ್ಡೆ, ಉಪಾಧ್ಯಕ್ಷೆ ಪ್ರೇಮಾ ಸಿ, ನಿರ್ದೇಶಕರಾದ ಗಿರಿಜಾ, ರಾಜೀವಿ, ಪ್ರೇಮಾ, ಮಮತಾ, ಕುಸುಮವಾತಿ, ಹೇಮಲತಾ, ಇಂದಿರಾ, ನಳಿನಾಕ್ಷಿ, ಅಪ್ಪಿ ಹಾಗೂ ಸುನಂದಾ, ಮಾಜಿ ಅಧ್ಯಕ್ಷರಾದ ಭವಾನಿ ಮತ್ತು ಕುಸುಮಾವತಿ ಉಪಸ್ಥಿತರಿದ್ದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು. ಅಧಿಕ ಹಾಲು ಉತ್ಪಾಧಿಸಿ ಡಿಪ್ಪೋಗೆ ಹಾಕಿದ ಜಮೀಲಾ ಪ್ರಥಮ , ಸುಮಾ ಬಿ. ಎಸ್ ದ್ವಿತೀಯ , ವಿಮಲ ತೃತೀಯ ಸ್ಥಾನ ಪಡೆದ ಅವರಿಗೆ ಬಹುಮಾನ ನೀಡಿ ಪ್ರೋತ್ಸಾಹ ನೀಡಲಾಯಿತು. ಪೂರ್ಣಿಮಾ, ಲಕ್ಷ್ಮೀ, ವಿಶಾಲಾಕ್ಷಿ ಹಾಗೂ ಸೀತಮ್ಮ ಅವರನ್ನು ಗೌರವಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಕೆ. ಸ್ವಾಗತಿಸಿ ವರದಿ ವಾಚಿಸಿದರು.  ನಿರ್ದೇಶಕಿ ವೈಶಾಲಿ  ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳಾದ ದೇವಕಿ, ಆನಂದ ಹಾಗೂ ಹರ್ಷಿತ ಎಲ್. ಆರ್. ಸಹಕರಿಸಿದರು.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!