ಬೆಳ್ತಂಗಡಿ: ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ನೇರಪಾವತಿ ಮಾಡಲು ಆಗ್ರಹಿಸಿ ಸೆ.21ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿನ ಮುಖ್ಯ ಮಂತ್ರಿಗಳ ಮನೆಯವರೆಗೆ ಬೃಹತ್ ಮಟ್ಟದ

ಪಾದಯಾತ್ರೆ ಹಮ್ಮಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಹೊರಗುತ್ತಿಗೆ ನೀರು ಸರಬರಾಜು ಸಹಾಯಕರು ಪಾಲ್ಗೊಳ್ಳುವುದರಿಂದ ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿಯಲ್ಲಿ ತಿಳಿಸಿದ್ದಾರೆ.











