32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್‌

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ಇಲ್ಲಿ
ಹಿಂದಿ ದಿವಸ್‌ ಕಾರ್ಯಕ್ರಮ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಿದ್ದವನ ಗುರುಕುಲ ಉಜಿರೆ ಇದರ ಪ್ರಬಂಧಕರಾದ ಡಾ. ಶಾಂತಿ ಸಾಗರ ಶಿರಹಟ್ಟಿ ಆಗಮಿಸಿದ್ದರು.
ವಿದ್ಯಾರ್ಥಿಗಳಿಂದ ಹಿಂದಿ ಭಾಷೆಯ ಮಹತ್ವ ,ನಾಲಗೆ ಸುರುಳಿ, ಸುವಿಚಾರ, ಸಮೂಹ ಗಾಯನ, ದೇಶಭಕ್ತಿ ಗೀತೆ, ರಸಪ್ರಶ್ನೆ ,ಅಭಿನಯ ಗೀತೆ ಮುಂತಾದ ಕಾರ್ಯಕ್ರಮಗಳನ್ನ ಆಯೋಜಿಸಲಾಗಿತ್ತು. ಮಕ್ಕಳಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಮುಖ್ಯ ಅತಿಥಿ ಭಾಷಣದಲ್ಲಿ ಹಿಂದಿ ದಿವಸದ ಮಹತ್ವ ಹಾಗೂ ಹಿಂದಿ ಭಾಷೆ ಬೆಳೆದು ಬಂದ ಬಗ್ಗೆ , ಹಿಂದಿ ,ಪ್ರಾಕೃತ ಮತ್ತು ಸಂಸ್ಕೃತ ಭಾಷೆಗೆ ಇರುವ ಸಂಬಂಧ. ಸಿಂಧು ..ಹಿಂದೂ… ಹಿಂದಿ . ಹೀಗೆ ಭಾಷೆಯ ಪದ ಬಳಕೆ ಆಯಿತು ಎಂದು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಹಿಂದಿ ಭಾಷೆಯನ್ನು ಉಳಿಸಿ ಬೆಳೆಸಲು ಮಕ್ಕಳಿಗೆ ಕಿವಿ ಮಾತು ಹೇಳಿದರು. ಶಾಲಾ ಮುಖ್ಯೋಪಾಧ್ಯಾಯರು ಮತ್ತು ಭಾಷಾ ಶಿಕ್ಷಕರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ಹಿಂದಿ ಸಂಘದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
10ನೇ ತರಗತಿಯ ಸನ್ನಿಧಿ ನಿರೂಪಿಸಿ, ಅಕ್ಷರ್ ಹಳೆಮನೆ ಸ್ವಾಗತಿಸಿ, 9ನೇ ತರಗತಿಯ ಪದ್ಮಜಾ ಧನ್ಯವಾದವಿತ್ತರು.

Related posts

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya
error: Content is protected !!