30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಪಡೆಯಿಂದ ಗೌರವ ರಕ್ಷೆ ಸ್ವೀಕರಿಸಿದರು.

ಕಸ್ತೂರಿ ರಂಗನ್ ವರದಿಯನ್ನು ನಮ್ಮ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಗಮನಕ್ಕೆ ಬಂದಿದೆ. ಈ ವಿಷಯದಲ್ಲಿ ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ‌ ಎಂದರು.

ಕಸ್ತೂರಿ ರಂಗನ್ ವರದಿಯ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತದೆ. ಎರಡನೇ ದಿನ ಪೂರ್ಣ ಪ್ರಮಾಣದಲ್ಲಿ ರೈತರ ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಸಿ, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ಜನರ ಬದುಕಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

Related posts

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya
error: Content is protected !!