32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ರೂ. 1 ಕೋಟಿ ಅನುದಾನ: ರಾಜ್ಯ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ನಿರ್ಧಾರಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ

ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆ ಹಾಗೂ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರೊಂದಿಗೆ ಕನ್ಯಾಡಿಯ ಪುಣ್ಯಕ್ಷೇತ್ರವಾದ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಸರ್ಕಾರವು ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ವಿಶೇಷ ಗೌರವ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

“ಕರಾವಳಿ ಮಣ್ಣಿನಲ್ಲಿ ನಡೆದ ಈ ವಿಶೇಷ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ದಶಕಗಳ ಕಾಲದ ಹೋರಾಟ ಮತ್ತು ಆಶಯಗಳಿಗೆ ಸೂಕ್ತವಾಗಿ ಸ್ಪಂದಿಸಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಬೆಳೆಸಲು ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ಅವರು ತಿಳಿಸಿದ್ದಾರೆ.

ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ರಕ್ಷಿತ್ ಶಿವರಾಂ ಅವರು ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ

Related posts

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಭೇಟಿ :

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!