26.5 C
ಪುತ್ತೂರು, ಬೆಳ್ತಂಗಡಿ
September 18, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ತುಳು ಭಾಷೆಗೆ ಆಡಳಿತಾತ್ಮಕ ಸ್ಥಾನಮಾನ – ಕಾನೂನಾತ್ಮಕ ಮಾನ್ಯತೆ: ಶ್ವೇತಾ ಜೈನ್

ಬೆಳ್ತಂಗಡಿ: ರಾಜ್ಯ ಸರ್ಕಾರವು ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವುದು ಕೇವಲ ಸಾಂಸ್ಕೃತಿಕ ವಿಜಯವಲ್ಲ,ಇದು ಭಾಷಾ ಅಸ್ಮಿತೆ, ಕಾನೂನಾತ್ಮಕ ಮಾನ್ಯತೆ ಮತ್ತು ಆಡಳಿತಾತ್ಮಕ ಒಳಗೊಳ್ಳುವಿಕೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ತುಳು ಕೂಟ ಮೂಡುಬಿದಿರೆ ಉಪಾಧ್ಯಕ್ಷೆ ಶ್ವೇತಾ ಜೈನ್ ತಿಳಿಸಿದ್ದಾರೆ.

ಇದು ಕರಾವಳಿಗರ ಬಹುದಿನಗಳ ಆಶಯವೂ ಆಗಿದೆ. ಸಾವಿರಾರು ವರ್ಷಗಳ ಶ್ರೀಮಂತ ಭಾಷಾ ಪರಂಪರೆಯನ್ನು ಹೊಂದಿರುವ ತುಳು ಭಾಷೆಗೆ ಸೂಕ್ತ ಮಾನ್ಯತೆ ದೊರಕಬೇಕೆಂಬ ಉದ್ದೇಶದಿಂದ ಹಲವು ವರ್ಷಗಳಿಂದ ತುಳುಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಹಾಗೂ ಕರಾವಳಿಯ ಜನರು ನಡೆಸಿಕೊಂಡು ಬಂದ ನಿರಂತರ ಪ್ರಯತ್ನಗಳಿಗೆ ಇಂದು ಫಲ ದೊರೆತಿದೆ. ಈ ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಮುಂದಿನ ದಿನಗಳಲ್ಲಿ ತುಳು ಭಾಷೆಯ ಆಡಳಿತಾತ್ಮಕ ಬಳಕೆಯ ಪರಿಣಾಮಕಾರಿ ಅನುಷ್ಠಾನದ ಜೊತೆಗೆ ಶಿಕ್ಷಣ, ಸಾಹಿತ್ಯ, ಸಂಶೋಧನೆ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿಯೂ ತುಳು ಭಾಷೆಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ನಮ್ಮ ಮುಂದಿನ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ಗುರಿ ತುಳು ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸುವುದಾಗಿರಬೇಕು. ಇದರಿಂದ ತುಳು ಭಾಷೆಗೆ ರಾಷ್ಟ್ರೀಯ ಮಟ್ಟದಲ್ಲಿ ಸಂವಿಧಾನಾತ್ಮಕ ಮಾನ್ಯತೆ ದೊರೆಯುವಂತಾಗುತ್ತದೆ ಎಂದು ಶ್ವೇತಾ ಜೈ‌ನ್ ಹೇಳಿದರು.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!