28.8 C
ಪುತ್ತೂರು, ಬೆಳ್ತಂಗಡಿ
September 18, 2026
ಅಭಿನಂದನೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತುಳು ಭಾಷೆ ಅಧಿಕೃತ ಭಾಷೆ ಘೋಷಣೆ: ಸಂತಸ ವ್ಯಕ್ತ ಪಡಿಸಿದ ಶಿವಪ್ರಸಾದ್ ಅಜಿಲರು

ಮಂಗಳೂರು : ತುಳು ಭಾಷೆಗೆ ಅಧಿಕೃತ ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯ ಮಾನ್ಯತೆ ದೊರೆತಿರುವುದು ಸಮಸ್ತ ತುಳುನಾಡಿನ ಜನತೆಗೆ ಹಾಗೂ ಭಾಷಾ ಪ್ರೇಮಿಗಳಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯ ಎಂದು ತುಳುವ ಮಹಾಸಭೆ ಇಂಟರ್ನ್ಯಾಷನಲ್ ದಕ್ಷಿಣ ಕನ್ನಡ ಅಧ್ಯಕ್ಷರಾದ ಶಿವಪ್ರಸಾದ್ ಅಜಿಲರು ತಿಳಿಸಿದ್ದಾರೆ.

ಶತಮಾನಗಳ ಇತಿಹಾಸ, ಶ್ರೀಮಂತ ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಹೊಂದಿರುವ ತುಳು ಭಾಷೆಯ ಈ ಐತಿಹಾಸಿಕ ಮೈಲಿಗಲ್ಲು ಕರಾವಳಿಯ ಜನತೆಯ ದಶಕಗಳ ಕನಸನ್ನು ನನಸು ಮಾಡಿದೆ.ಈ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ ಸಾಹಿತಿಗಳು, ತುಳು ಒಕ್ಕೂಟಗಳು, ಸಾಂಸ್ಕೃತಿಕ ನಾಯಕರು ಮತ್ತು ಹೋರಾಟಗಾರರ ಶ್ರಮ ಅಪಾರವಾದದ್ದು.ಜನರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿ, ನಿರ್ಧಾರ ಕೈಗೊಂಡ ಸನ್ಮಾನ್ಯ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸದಸ್ಯರು ಹಾಗೂ ಈ ವಿಷಯವಾಗಿ ಗಟ್ಟಿಯಾಗಿ ಧ್ವನಿ ಎತ್ತಿದ ಕರಾವಳಿ ಭಾಗದ ಜನಪ್ರತಿನಿಧಿಗಳು ಅಭಿನಂದನೆಗಳಿಗೆ ಸಂಪೂರ್ಣ ಅರ್ಹರು ಎಂದು ಶಿವಪ್ರಸಾದ್ ಅಜಿಲರು ತಿಳಿಸಿದ್ದಾರೆ.

ತುಳು ಭಾಷೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗಮನಕ್ಕೆ ತರುವಂತೆ ಈ ಹಿಂದೆ ವಿಶ್ವ ತುಳು ಸಮ್ಮೇಳನವನ್ನು ಸಂಘಟಿಸಿದ ಶಿಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಆದ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಹಾಗೂ ದುಬೈನಲ್ಲಿ ವಿಶ್ವ ತುಳು ಸಮ್ಮೇಳನವನ್ನು ಸಂಘಟಿಸಿದ ಮಾನ್ಯ ಸರ್ವೋತ್ತಮ್ ಶೆಟ್ಟಿ ಅವರನ್ನು ಕೂಡ ನಾನು ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸುತ್ತಿದ್ದೇನೆ. 2028ಕ್ಕೆ ವಿಶ್ವ ತುಳು ಸಂಘಟನೆಯ ನೂರನೇ ವರ್ಷ ಆಚರಣೆಯು ಬಹಳ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸುತ್ತೇನೆ.

Related posts

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!