30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕರ ಸಲಹೆಗೆ ಆಡಳಿತಾತ್ಮಕ ಸ್ಪಂದನೆ : ಕಸ್ತೂರಿರಂಗನ್ ವರದಿ ಕರಡು ಕುರಿತು ವಿಶೇಷ ಗ್ರಾಮಸಭೆಯಲ್ಲಿ ಚರ್ಚೆ

ಬೆಳ್ತಂಗಡಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯಕ್ಕೆ (ESA) ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮ ಮಟ್ಟದಲ್ಲಿಯೇ ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ದಾಖಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಅವರು ಸೆ. 15ರಂದು ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಲಹೆ ನೀಡಿದ್ದರು.

ಶಾಸಕರ ಈ ಸಲಹೆಯ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದು ಅದರಂತೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರು ಆದೇಶಿಸಿದ್ದು ಅದರನ್ವಯ ತಾಲ್ಲೂಕು ಪಂಚಾಯತ್ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದ್ದು, ವಿಶೇಷ ಗ್ರಾಮಸಭೆಯ ಮಾಹಿತಿಯನ್ನು ಪಂಚತಂತ್ರ 2.0ರಲ್ಲಿ ದಾಖಲಿಸುವಂತೆ ಹಾಗೂ ಕಸ್ತೂರಿರಂಗನ್ ವರದಿಯ ಕರಡು ಪ್ರತಿಯ ಕುರಿತು ಗ್ರಾಮಸಭೆಯಲ್ಲಿ ಚರ್ಚಿಸಿ, ಸಾರ್ವಜನಿಕರಿಂದ ವ್ಯಕ್ತವಾಗುವ ಅಭಿಪ್ರಾಯ, ಆಕ್ಷೇಪಣೆ ಮತ್ತು ಸಲಹೆಗಳನ್ನು ನಡಾವಳಿಯಲ್ಲಿ ದಾಖಲಿಸುವಂತೆ ತಿಳಿಸಲಾಗಿದೆ.

ಇದರಿಂದ ಪಶ್ಚಿಮ ಘಟ್ಟ ಪ್ರದೇಶದ ರೈತರು, ಸ್ಥಳೀಯ ನಿವಾಸಿಗಳು ಹಾಗೂ ಗ್ರಾಮಸ್ಥರ ಸ್ಥಳೀಯ ವಾಸ್ತವಾಂಶಗಳು ಮತ್ತು ಅಭಿಪ್ರಾಯಗಳನ್ನು ಅಧಿಕೃತವಾಗಿ ದಾಖಲಿಸಿ ಸರ್ಕಾರದ ಗಮನಕ್ಕೆ ತರುವ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾ ಕೆಡಿಪಿ ಸಭೆಯಲ್ಲಿ ಶಾಸಕರು ಮುಂದಿಟ್ಟ ಸಲಹೆಗೆ ತಕ್ಷಣವೇ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗಿರುವುದು, ಸ್ಥಳೀಯ ಜನರ ಅಭಿಪ್ರಾಯಗಳಿಗೆ ಅಧಿಕೃತ ದಾಖಲೆ ರೂಪ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟ ಪ್ರದೇಶದ ಗ್ರಾಮಸ್ಥರು ತಮ್ಮ ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಸ್ತೂರಿರಂಗನ್ ವರದಿ ಕರಡು ಹಾಗೂ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ ತಮ್ಮ ಪ್ರದೇಶದ ವಾಸ್ತವಾಂಶಗಳು, ಸಮಸ್ಯೆಗಳು, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಂಪೂರ್ಣವಾಗಿ ನಡಾವಳಿಯಲ್ಲಿ ದಾಖಲಿಸುವಂತೆ ಶಾಸಕ ಹರೀಶ್ ಪೂಂಜ ಅವರು ಮನವಿ ಮಾಡಿದ್ದಾರೆ.

Related posts

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!