
ಬೆಳ್ತಂಗಡಿ: 2013ರ ವಿಧಾನಸಭಾ ಕಲಾಪದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ತುಳು ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ತುಳು ಭಾಷೆಗೆ ವಿಶೇಷ ಮಾನ್ಯತೆ ಹಾಗೂ ಪ್ರಾತಿನಿಧ್ಯ ದೊರೆಯಬೇಕೆಂಬ ಹೋರಾಟಕ್ಕೆ ನಾಂದಿ ಹಾಡಿದ್ದರು.

ಇದೀಗ ಸೆ.18ರಂದು ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಈ ಮೂಲಕ ಕೆ. ವಸಂತ ಬಂಗೇರ ಅವರ ಕನಸು ನನಸಾಗುವಂತಾಗಿದೆ.
ತುಳು ಭಾಷೆಗೆ ಈ ಮಹತ್ವದ ಗೌರವ ದೊರಕಿಸಿಕೊಟ್ಟ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಸಂಪುಟದ ಎಲ್ಲ ಸಚಿವರಿಗೆ ಹೃದಯಪೂರ್ವಕ ಕೃತಜ್ಞತೆಗಳು ಎಂದು ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ತಿಳಿಸಿದ್ದಾರೆ.











