30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.21: 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ ವತಿಯಿಂದ 2026 ನೇ ಸಾಲಿನ ದ.ಕ., ಉಡುಪಿ, ಕಾಸರಗೋಡು ಒಳಗೊಂಡು ಮಂಗಳೂರು ವಿಭಾಗದ 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮ ಸೆ.21ರಂದು ಬಿ.ಸಿ. ರೋಡು ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮಿ ದುರ್ಗಾಂಬಾ ಕ್ಷೇತ್ರ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಸ್ವಾಮೀಜಿಯವರು ನೆರವೇರಿಸಲಿದ್ದಾರೆ. ದ.ಕ. ಆರೋಗ್ಯ ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಪ್ರಥಮ ಕರಷಿ ಪ್ರಶಸ್ತಿ ಸನ್ಮಾನಕ್ಕೆ ಚಾಲನೆ ನೀಡಲಿದ್ದಾರೆ.

ಅಧ್ಯಕ್ಷತೆಯನ್ನು ಕರ್ನಾಟಕ ಸಾವಯವ ಕೃಷಿ ಯೋಜನೆ ಆಡಳಿತ ನಿರ್ದೇಶಕ ಮೋಹನ್ ಗೌಡ ವಹಿಸಲಿದ್ದಾರೆ.
ಮುಖ್ಯ ಅತಿಥಿಗಾಳಗಿ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಉಳಿಪಾಡಿಗುತ್ತು, ವಿಧನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ಇಂಚಾಡಿ, ಕಸ್ತೂರಿ ರಂಗನ್ ಹೋರಾಟ ಸಮಿತಿ ಸಂಚಾಲಕ ಕಿಶೋರ್ ಗೌಡ ಶಿರಾಡಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ೨೦೨೫ನೇ ಕೃಷಿ ಪ್ರಶಸ್ತಿ ಸನ್ಮಾನಿತರಾದ ನಿವೃತ್ತ ಸೈನಿಕ ಅಮ್ಮಣ್ಣ ರೈ ಪುತ್ತೂರು, ಪೊಸಂದೊಡಿ ದುಗ್ಗಪ್ಪ ಗೌಡ, 2025ನೇ ಕೃಷಿ ಪ್ರಶಸ್ತಿ ವಿಜೇತರಾದ ಮಾಳ ವಿನೀತ್ ಹೆಗ್ಡೆ, ರಾಮ ಮೂರ್ತಿ ಕಲ್ಕೂರ್ ಹೆಬ್ರಿ, ಲ್ಯಾನ್ಸಿ ಪಿರೇರಾ ಬಂಟ್ವಾಳ, ಆನಂದ ಸಿ.ಹೆಚ್. ಕಾರಡ್ಕ, ಮನ್ಮಥ ನಾಯಕ್ ಹೆಬ್ರಿ, ಸತೀಶ್ ಹೆಗ್ಡೆ ಕುಂದಾಪುರ, ಕೃಷ್ಣ ಭಟ್ ಎಡನೀರು, ದ.ಕ. ಹಿರಿಯ ಮುಖ್ಯಾಧಿಕಾರಿ ಭಾರತಿ ರೈ ಪುತ್ತೂರು, ಉಡುಪಿ ಹಿರಿಯ ಮುಖ್ಯಾಧಿಕಾರಿ ಶಾರದಾ ಶೆಟ್ಟಿ ಕಾರ್ಕಳ, ಕಸರಗೋಡು ಜಿಲ್ಲಾ ಹಿರಿಯ ಅಧಿಕಾರಿ ಪೂರ್ಣಿಮಾ ಅಡೂರ್, ಕರ್ನಾಟಕ ಸಾವಯವ ಕೃಷಿ ಯೋಜನೆ ಸಹ ಆಡಳಿತ ನಿರ್ದೇಶಕಿ ಅಶ್ವಿನಿ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಸಾವಯವ ಕೃಷಿ ಯೋಜನೆ ಆಡಳಿತ ನಿರ್ದೇಶಕ ಮೋಹನ್ ಗೌಡ ತಿಳಿಸಿದ್ದಾರೆ.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya
error: Content is protected !!