September 19, 2026
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಕರಾವಳಿಗರ ನಿರಂತರ ಹೋರಾಟಕ್ಕೆ ಜಯ-ಪದ್ಮರಾಜ್ ಆರ್.ಪೂಜಾರಿ

ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿರುವುದು ಕರಾವಳಿಯ ಭವ್ಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಸಿ.ಎಂ ಡಿ.ಕೆ.ಶಿವಕುಮಾರ್ ದೂರದೃಷ್ಟಿಯ ನಾಯಕತ್ವಕ್ಕೆ ತುಳುನಾಡು ಸದಾ ಋಣಿ. ಈ ನಿರ್ಧಾರದ ಮೂಲಕ ತುಳುನಾಡು ಕೇವಲ ಭಾಷಿಕ ಮಾನ್ಯತೆಯನ್ನಷ್ಟೇ ಅಲ್ಲದೆ, ತನ್ನ ಸಾಂಸ್ಕೃತಿಕ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಸರಕಾರದ ಈ ನಿರ್ಧಾರ ಮುಂಬರುವ ಪೀಳಿಗೆಗೆ ತುಳು ಭಾಷೆಯನ್ನು ಉಳಿಸಿ, ಬೆಳೆಸಲು ಹಾಗೂ ಭಾಷಾ ಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.

Related posts

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya
error: Content is protected !!