ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲ್ಯಾಲ ಇದರ ವತಿಯಿಂದ ಸೆ. 17ರಂದು ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆಯ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಂದರ ಆಚಾರ್ಯ ಕುದ್ಯಾಡಿ ಅವರನ್ನು ಸನ್ಮಾನಿಸಲಾಯಿತು.
ಇವರು ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಅಧ್ಯಕ್ಷರಾಗಿ ಆನೆಗುಂದಿ ಗುರು ಸೇವಾ ಪರಿಷತ್ ಬೆಳ್ತಂಗಡಿ ಮಂಡಲದ ಗೌರವಧ್ಯಕ್ಷರಾಗಿ ಅಳದಂಗಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಹಾಗೂ ಕುದ್ಯಾಡಿ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.











