ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ದ್ವಿಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿವೆ.
ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪಿಯು ಕಾಲೇಜಿನ ರೇಂಜರ್ಸ್ ವಿಭಾಗ ಪ್ರಥಮ ಸ್ಥಾನ ಹಾಗೂ ರೋವರ್ಸ್ ವಿಭಾಗವೂ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರೊಂದಿಗೆ ಎರಡೂ ತಂಡಗಳು ಸತತ ನಾಲ್ಕನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿವೆ.
ತಂಡಗಳಿಗೆ ರೋವರ್ ಲೀಡರ್ (RL) ಬೆಳಿಯಪ್ಪ ಹಾಗೂ ರೇಂಜರ್ ಲೀಡರ್ (RSL) ರಕ್ಷಾ ತರಬೇತಿ ನೀಡಿ ಸಜ್ಜುಗೊಳಿಸಿದ್ದರು.











