32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡಿನ ಜನರ ಬಹುದಿನಗಳ ಕನಸಿಗೆ ಗೌರವ

ಕರ್ನಾಟಕ ಸರ್ಕಾರವು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಚಾರ. ಇದು ಕೇವಲ ಒಂದು ಭಾಷೆಗೆ ದೊರೆತ ಮಾನ್ಯತೆಯಲ್ಲ, ನಮ್ಮ ಹಿರಿಯರು ಉಳಿಸಿಕೊಂಡು ಬಂದ ತುಳುನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ, ಪರಂಪರೆ, ಸಾಹಿತ್ಯ, ದೈವಾರಾಧನೆ, ಯಕ್ಷಗಾನ ಹಾಗೂ ಜನಜೀವನಕ್ಕೆ ದೊರೆತ ಗೌರವವಾಗಿದೆ.
ತುಳು ಭಾಷೆ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆಯನ್ನು ತನ್ನೊಳಗೆ ಉಳಿಸಿಕೊಂಡಿರುವ ಜೀವಂತ ಭಾಷೆ. ಈ ನಿರ್ಧಾರದಿಂದ ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ಪರಿಚಯ ಮತ್ತಷ್ಟು ಬಲಗೊಳ್ಳಲಿದೆ. ಕರ್ನಾಟಕ ಸರ್ಕಾರದ ಈ ಐತಿಹಾಸಿಕ ನಿರ್ಧಾರವನ್ನು ತುಳುನಾಡಿನ ದೈವ ಚಾಕಿರಿ ಮಾಡುವವರ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ತುಳು ಭಾಷೆಯ ಬೆಳವಣಿಗೆಗೆ ಸರ್ಕಾರ, ಸಂಘ-ಸಂಸ್ಥೆಗಳು, ಸಾಹಿತಿಗಳು ಮತ್ತು ಪ್ರತಿಯೊಬ್ಬ ತುಳುವರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಾಗಿದೆ ಎಂದು ದೈವ ನರ್ತಕರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ರವೀಶ್ ಪಡುಮಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!