September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ರಾಜ್ಯ ಸರ್ಕಾರದ ಸರ್ವ ಶ್ರೇಷ್ಠ ಸಾಧನೆ-ಸಂತೋಷ್ ಕುಮಾರ್

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆದಿದ್ರಾವಿಡ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮುಖ್ಯಮಂತ್ರಿ ‌ಡಿ. ಕೆ. ಘೋಷಿಸಿರುವುದು ಈ ಸರಕಾರದ ಸರ್ವ ಶ್ರೇಷ್ಠ ‌ಸಾಧನೆ ಹಾಗೂ ಐತಿಹಾಸಿಕ ನಿರ್ಧಾರ,ತುಳುನಾಡಿನ ಭವ್ಯ ಪರಂಪರೆಯನ್ನು ರಾಜ್ಯ ಸರಕಾರ ಎತ್ತಿ ಹಿಡಿದಿದೆ. ಈ ಮೂಲಕ ಕರಾವಳಿಯ ಕಲೆ, ಜಾನಪದ, ಸಂಸ್ಕೃತಿ ಹಾಗೂ ಇಲ್ಲಿನ ಭಾಷೆಗೆ ಅಧಿಕೃತ ಮನ್ನಣೆ ದೊರೆತಿರುವುದು ಸಂತೋಷದ ವಿಚಾರ. ಈ ಮಹತ್ತರ ಕಾರ್ಯವನ್ನು ‌ಮಾಡಿದ ಮುಖ್ಯಮಂತ್ರಿಗಳಿಗೆ‌ ಅಭಿನಂದನೆಗಳು. ಅದೇ ರೀತಿ‌ ಪುತ್ತೂರು, ಕನ್ಯಾಡಿ ಸೇರಿದಂತೆ ಕರಾವಳಿಯ ಧಾರ್ಮಿಕ ‌ಕ್ಷೇತ್ರಗಳ ಅಭಿವೃದ್ಧಿಗೂ‌ ಕೋಟಿ ವೆಚ್ಚದ ಅನುದಾನಗಳನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಸರಕಾರ ಬದ್ಧತೆ‌ ಪ್ರದರ್ಶಿಸಿದೆ. ವಿಶೇಷ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ಭಾವನೆಗಳಿಗೆ ಸಕಾಲದಲ್ಲಿ ಸ್ಪಂದಿಸಿದೆ. ಈ ಮೂಲಕ ಜಗತ್ತಿನ ಮೂಲೆ‌ ಮೂಲೆಯಲ್ಲಿರುವ ತುಳುವರು, ತುಳು ಭಾಷೆಯನ್ನು ಮಾತನಾಡುವವರು, ಸಾಹಿತಿಗಳು, ಸಂಘ ಸಂಸ್ಥೆಗಳ ಸದಸ್ಯರು, ಕರಾವಳಿ ಪ್ರಾಂತ್ಯದ ಜನತೆ ಸಂತಸ ಪಡುವಂತಾಗಿದೆ. ಸೌಹಾರ್ದತೆಯ ಸ್ಥಾನ, ದೇವಾಲಯಗಳ ಬೀಡಾದ ಕರಾವಳಿಯ ಸರ್ವರೂ ಮುಖ್ಯಮಂತ್ರಿಗಳ‌ ಈ ಕಾರ್ಯವನ್ನು ಶ್ಲಾಘಿಸಬೇಕಿದೆ ಎಂದು ದ.ಕ. ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ಸಂತೋಷ್ ಕುಮಾರ್ ಲಾಯಿಲಾ ಹೇಳಿಕೆ ನೀಡಿದ್ದಾರೆ.

Related posts

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya
error: Content is protected !!