ಬೆಳ್ತಂಗಡಿ: ಇದುವರೆಗೆ ಅನೇಕ ಸರ್ಕಾರಗಳು ಅಧಿಕಾರಕ್ಕೆ ಬಂದರೂ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಕುರಿತು ಹೇಳಿಕೆಗಳನ್ನು ನೀಡಿದ್ದವೇ ಹೊರತು, ಕಾರ್ಯರೂಪಕ್ಕೆ ತಂದಿರಲಿಲ್ಲ.
ಆದರೆ ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿ ತುಳು ಭಾಷೆಗೆ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಳುನಾಡು ಹಾಗೂ ತುಳುವರ ಅಭಿವೃದ್ಧಿಗೆ ಭರಪೂರ ಅನುದಾನ ನೀಡಿದ್ದು, ತುಳುನಾಡಿನ ತುಳುವರ ಪರವಾಗಿ ಅವರಿಗೆ ಮನದಾಳದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ತುಳುನಾಡಿನ ಸೇವೆ ಮಾಡಲು ಇಲ್ಲಿನ ದೈವ-ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಅವರು ಹಾರೈಸಿದರು.











