ಬೆಳ್ತಂಗಡಿ: ತುಳು ಭಾಷೆಗೆ ಸರಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವುದು ಸಮಸ್ತ ತುಳು ಭಾಷಿಕರಿಗೆ ಸಂತಸದ ವಿಷಯ. ದಶಕಗಳ ಕಾಲ ನಡೆದ ಕರಾವಳಿ ಜನರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿರುವುದು ಕರಾವಳಿಯ ಭವ್ಯ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಸಿ.ಎಂ ಡಿ.ಕೆ.ಶಿವಕುಮಾರ್ ದೂರದೃಷ್ಟಿಯ ನಾಯಕತ್ವಕ್ಕೆ ತುಳುನಾಡು ಸದಾ ಋಣಿ. ಈ ನಿರ್ಧಾರದ ಮೂಲಕ ತುಳುನಾಡು ಕೇವಲ ಭಾಷಿಕ ಮಾನ್ಯತೆಯನ್ನಷ್ಟೇ ಅಲ್ಲದೆ, ತನ್ನ ಸಾಂಸ್ಕೃತಿಕ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಸರಕಾರದ ಈ ನಿರ್ಧಾರ ಮುಂಬರುವ ಪೀಳಿಗೆಗೆ ತುಳು ಭಾಷೆಯನ್ನು ಉಳಿಸಿ, ಬೆಳೆಸಲು ಹಾಗೂ ಭಾಷಾ ಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.
ಅಭಿನಂದನೆಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ







