ಬೆಳ್ತಂಗಡಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ವಿಚಾರ ತಿಳಿದು ಸಂತೋಷವಾಯಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದೇಶ-ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರಕಾರಕ್ಕೆ ವಿಶೇಷ ಅಭಿನಂದನೆಗಳು.
ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೆ ಕೂಡಾ ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ.
2009ರಲ್ಲಿ ನಾವು ಉಜಿರೆಯಲ್ಲಿ ವಿಶ್ವತುಳು ಸಮ್ಮೇಳನ ಆಯೋಜಿಸಿ ತುಳು ಭಾಷೆ, ನಾಡು, ನುಡಿ, ಸಂಸ್ಕೃತಿ ಬಗ್ಗೆ ವಿಶೇಷ ಗಮನ ಸೆಳೆದಿರುತ್ತೇವೆ. ತುಳುಗ್ರಾಮದ ಕಲ್ಪನೆ ಸರ್ವರ ಆಕರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು.
ನಮ್ಮ ಬೇಡಿಕೆಗೆ ಸರಕಾರದ ಸಕಾರಾತ್ಮಕವಾದ ಸ್ಪಂದನೆಗೆ ತುಳುನಾಡಿನ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











