ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಆಯ್ಕೆಯಾಗಿದ್ದಾರೆ.
ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೆ. 27ರಂದು ನಡೆಯುವ ರಾಜ್ಯ ಮಟ್ಟದ ಒಕ್ಕಲಿಗ ಹಾಗೂ ಅದರ 116 ಉಪಜಾತಿಗಳ ಸ್ನೇಹ ಮಿಲನ -ಅಭಿನಂದನೆ – ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.











