ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಮೂಡಿಬಂದರು.
ಪುರುಷರ ವಿಭಾಗದಲ್ಲಿ ಒಟ್ಟು 26 ತಂಡಗಳು ಭಾಗವಹಿಸಿದ್ದು, ಸೆಮಿಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 -1 ಅಂತರದಲ್ಲಿ ಪರಭವ ಗೊಳಿಸಿ ಫೈನಲ್ ಪ್ರವೇಶ ಪಡೆಯಿತು, ಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ತಂಡವನ್ನು 3 – 1 ಅಂತರದಲ್ಲಿ ಸೋಲಿಸಿ ಚಾಂಪಿಯನಾಗಿ ಮೂಡಿಬಂದಿತು. ಅ.1ರಂದು ಬೆಂಗಳೂರಿನ ಆದಿತ್ಯ ಕಾಲೇಜಲ್ಲಿ ನಡೆಯುವ ಅಂತರ್ ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿರುತ್ತದೆ
ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಶಿವಪ್ರಸಾದ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ, ಮುಂದಿನ ಹಂತದ ಪಂದ್ಯಾವಳಿಗೆ ಶುಭ ಹಾರೈಸಿದರು.











