ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ಸೆಪ್ಟೆಂಬರ್ 17ರಂದು ಅಭಿಯಂತರರ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿ ತೃಪ್ತಿ ಶೆಟ್ಟಿ ಬಿ.ಎಂ. ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ನ ವಿವಿಧ ವಿಭಾಗಗಳು, ಡಿಪ್ಲೊಮಾ ಇಂಜಿನಿಯರಿಂಗ್ನ ಉಪಯೋಗಗಳು ಹಾಗೂ ಕೌಶಲ್ಯಾಭಿವೃದ್ಧಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಸಮಾಜದ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಪಾತ್ರ ಮತ್ತು ಕಾರ್ಯಕ್ಷಮತೆಯ ಬಗ್ಗೆಯೂ ವಿವರಿಸಿದರು.
ಗಣಿತ ಅಧ್ಯಾಪಕ ರವೀಶ್ ಕುಮಾರ್ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ, ಶಿಸ್ತು, ಕಾರ್ಯದಕ್ಷತೆ, ಪ್ರಾಮಾಣಿಕತೆ, ಸಮಯಪ್ರಜ್ಞೆ ಹಾಗೂ ದೇಶಪ್ರೇಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಮಾಜಕ್ಕೆ ವಿಶ್ವೇಶ್ವರಯ್ಯ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ವಹಿಸಿದ್ದರು. ವಿದ್ಯಾರ್ಥಿ ಮೌನೇಶ್ ಅಭಿಯಂತರರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ವರ್ಷಿಣಿ ಸ್ವಾಗತಿಸಿದರು. ಫಾತಿಮಾತ್ ಅಫ್ರಾ ವಂದಿಸಿದರು. ಫಾತಿಮಾ ಸೈಫಾ ಕಾರ್ಯಕ್ರಮ ನಿರೂಪಿಸಿದರು.











