ಕರ್ನಾಟಕ ಸರ್ಕಾರವು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಚಾರ. ಇದು ಕೇವಲ ಒಂದು ಭಾಷೆಗೆ ದೊರೆತ ಮಾನ್ಯತೆಯಲ್ಲ, ನಮ್ಮ ಹಿರಿಯರು ಉಳಿಸಿಕೊಂಡು ಬಂದ ತುಳುನಾಡಿನ ಶ್ರೀಮಂತ ಇತಿಹಾಸ, ಸಂಸ್ಕೃತಿ, ಪರಂಪರೆ, ಸಾಹಿತ್ಯ, ದೈವಾರಾಧನೆ, ಯಕ್ಷಗಾನ ಹಾಗೂ ಜನಜೀವನಕ್ಕೆ ದೊರೆತ ಗೌರವವಾಗಿದೆ.
ತುಳು ಭಾಷೆ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆಯನ್ನು ತನ್ನೊಳಗೆ ಉಳಿಸಿಕೊಂಡಿರುವ ಜೀವಂತ ಭಾಷೆ. ಈ ನಿರ್ಧಾರದಿಂದ ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ಪರಿಚಯ ಮತ್ತಷ್ಟು ಬಲಗೊಳ್ಳಲಿದೆ. ಕರ್ನಾಟಕ ಸರ್ಕಾರದ ಈ ಐತಿಹಾಸಿಕ ನಿರ್ಧಾರವನ್ನು ತುಳುನಾಡಿನ ದೈವ ಚಾಕಿರಿ ಮಾಡುವವರ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ತುಳು ಭಾಷೆಯ ಬೆಳವಣಿಗೆಗೆ ಸರ್ಕಾರ, ಸಂಘ-ಸಂಸ್ಥೆಗಳು, ಸಾಹಿತಿಗಳು ಮತ್ತು ಪ್ರತಿಯೊಬ್ಬ ತುಳುವರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಾಗಿದೆ ಎಂದು ದೈವ ನರ್ತಕರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ರವೀಶ್ ಪಡುಮಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
previous post







