September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ತುಳು ಭಾಷೆಗೆ ಐತಿಹಾಸಿಕ ಗೌರವ: ಅಧಿಕೃತ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ-ಡಾ|| ಹೆಗ್ಗಡೆ

ಬೆಳ್ತಂಗಡಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ವಿಚಾರ ತಿಳಿದು ಸಂತೋಷವಾಯಿತು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದೇಶ-ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರಕಾರಕ್ಕೆ ವಿಶೇಷ ಅಭಿನಂದನೆಗಳು.

ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೆ ಕೂಡಾ ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ.
2009ರಲ್ಲಿ ನಾವು ಉಜಿರೆಯಲ್ಲಿ ವಿಶ್ವತುಳು ಸಮ್ಮೇಳನ ಆಯೋಜಿಸಿ ತುಳು ಭಾಷೆ, ನಾಡು, ನುಡಿ, ಸಂಸ್ಕೃತಿ ಬಗ್ಗೆ ವಿಶೇಷ ಗಮನ ಸೆಳೆದಿರುತ್ತೇವೆ. ತುಳುಗ್ರಾಮದ ಕಲ್ಪನೆ ಸರ್ವರ ಆಕರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು.
ನಮ್ಮ ಬೇಡಿಕೆಗೆ ಸರಕಾರದ ಸಕಾರಾತ್ಮಕವಾದ ಸ್ಪಂದನೆಗೆ ತುಳುನಾಡಿನ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!