September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬ್ಯಾಡ್ಮಿಂಟನ್ ಪಂದ್ಯಾಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್

ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಲಯ ಮಟ್ಟದ ಪುರುಷರ ಶೆಟ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಮೂಡಿಬಂದರು.

ಪುರುಷರ ವಿಭಾಗದಲ್ಲಿ ಒಟ್ಟು 26 ತಂಡಗಳು ಭಾಗವಹಿಸಿದ್ದು, ಸೆಮಿಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ತಂಡವನ್ನು 3 -1 ಅಂತರದಲ್ಲಿ ಪರಭವ ಗೊಳಿಸಿ ಫೈನಲ್ ಪ್ರವೇಶ ಪಡೆಯಿತು, ಫೈನಲ್ ಪಂದ್ಯಾಟದಲ್ಲಿ ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ತಂಡವನ್ನು 3 – 1 ಅಂತರದಲ್ಲಿ ಸೋಲಿಸಿ ಚಾಂಪಿಯನಾಗಿ ಮೂಡಿಬಂದಿತು. ಅ.1ರಂದು ಬೆಂಗಳೂರಿನ ಆದಿತ್ಯ ಕಾಲೇಜಲ್ಲಿ ನಡೆಯುವ ಅಂತರ್ ವಲಯ ಮಟ್ಟದ ಪುರುಷರ ಶೆಟಲ್ ಬ್ಯಾಡ್ಮಿಂಟಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿರುತ್ತದೆ

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಶಿವಪ್ರಸಾದ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿ, ಮುಂದಿನ ಹಂತದ ಪಂದ್ಯಾವಳಿಗೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya
error: Content is protected !!