27.8 C
ಪುತ್ತೂರು, ಬೆಳ್ತಂಗಡಿ
September 21, 2026
ಅಪರಾಧ ಸುದ್ದಿವರದಿ

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶ: ಅರಣ್ಯ ಇಲಾಖೆಯಿಂದ ದೂರರ್ಜಿ ದಾಖಲು

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ಸದ್ರಿ ಯುವಕರು ಪೂರ್ವಾನುಮತಿ‌ ಪಡೆಯದೇ ರಕ್ಷಿತಾರಣ್ಯಕ್ಕೆ ತೆರಳಿದ ಹಿನ್ನೆಲೆಯಲ್ಲಿ, ಅವರುಗಳ ವಿರುದ್ಧ ಅರಣ್ಯ ಇಲಾಖೆಯು ದೂರರ್ಜಿ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದೆ.

ಸದ್ರಿ ಇಬ್ಬರು ಯುವಕರು ಠಾಣೆಗೆ ಬಂದಾಗ ಅವರುಗಳ ಮೇಲೆ ಯಾವುದೇ ಹಲ್ಲೆ ಅಥವಾ ಯಾವುದೇ ತೊಂದರೆಯಾಗಿದ್ದಲ್ಲಿ ದೂರು‌ ನೀಡಲು ಸೂಚಿಸಿದ್ದು, ಯುವಕರು ತಾವುಗಳು ಈ ಬಗ್ಗೆ ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಪ್ರಸ್ತುತ ಯಾವುದೇ ದೂರು ದಾಖಲಾಗಿರುವುದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya
error: Content is protected !!