27.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವೇಣೂರು: ಶಾಸಕ ಹರೀಶ್ ಪೂಂಜರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ- ಸಾರ್ವಜನಿಕ ರಿಕ್ಷಾ ತಂಗುದಾಣ ಉದ್ಘಾಟನೆ

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ ವಿಶೇಷ ಅನುದಾನಗಳಡಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ನೆರವೇರಿಸಿದರು.

ವೇಣೂರು ಸ್ವಸ್ತಿಕ ನಗರದಲ್ಲಿ ರೂ. ೨.೩೦ ಲಕ್ಷ ಮತ್ತು ಬಜಿರೆ ಗ್ರಾಮದ ಮುದ್ದಾಡಿ ಬಳಿ ರೂ. ೧.೭೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರಿಟ್ ರಸ್ತೆಗೆ ಶಿಲಾನ್ಯಾಸ ಮತ್ತು ಬಜಿರೆಯ ಮುದ್ದಾಡಿಯಲ್ಲಿ ರೂ. ೧.೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಾರ್ವಜನಿಕ ರಿಕ್ಷಾ ತಂಗುದಾಣದ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.

ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಸುರೇಶ್ ಆರಿಗ ಪೆರ್ಮಾಣುಗುತ್ತು, ಉದ್ಯಮಿ ಕೆ. ಭಾಸ್ಕರ ಪೈ, ತಾ.ಪಂ. ಮಾಜಿ ಸದಸ್ಯ ಕೆ. ವಿಜಯ ಗೌಡ, ನ್ಯಾಯವಾದಿ ಸಹನಾ ಕುಂದರ್ ಸೂಡಾ ಗುಂಡೂರಿ, ಪಂಚಾಯತು ಸದಸ್ಯರಾದ ಸುನಿಲ್ ಕುಮಾರ್, ಸುಜಾತ, ಲೀಲಾವತಿ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾದ ವಸಂತ ಮಡಿವಾಳ ಅಂಡಿಂಜೆ, ಪ್ರಮುಖರಾದ ಶಶಿಕುಮಾರ್ ಇಂದ್ರ, ಶ್ರೀಮತಿ ರೂಪಾ ಚಂದನ ಸೇರಿದಂತೆ ಊರಿನ ಹಲವು ಮಂದಿ ಗಣ್ಯರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯರಾಗಿರುವ ಅರುಣ್ ಕ್ರಾಸ್ತ ಅವರು ಸ್ವಾಗತಿಸಿದರು.

Related posts

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya
error: Content is protected !!