32 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿ

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ ‘ಭಾರತದ ಬಹುತ್ವ – ಬಂಧುತ್ವ’ ವಿಚಾರ ಗೋಷ್ಠಿ

​ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಸಮಿತಿಯ ವತಿಯಿಂದ ಇಲ್ಲಿನ‌ ಮದರಸ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯದ ನೆನಪಿಗಾಗಿ 2026ರ ಸೆ. 19 ರಂದು ‘ಭಾರತದ ಬಹುತ್ವ – ಬಂಧುತ್ವ’ ವಿಚಾರ ಗೋಷ್ಠಿ ಅರ್ಥಪೂರ್ಣವಾಗಿ ನೆರವೇರಿತು.

​ಕಾರ್ಯಕ್ರಮಕ್ಕೂ ಮುನ್ನ ಎಂ.ಜೆ.ಎಂ. ಮಸೀದಿಯಲ್ಲಿ ಮೌಲೀದ್ ಪಾರಾಯಣ ನಡೆಸಲಾಯಿತು. ಬಳಿಕ ನಡೆದ ​ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಅಧ್ಯಕ್ಷ ಹಾಜಿ ಹೈದರ್ ಮದನಿ ವಹಿಸಿದ್ದರು. ಉಜಿರೆಯ ಎಂ.ಜೆ.ಎಂ. ಮಸೀದಿಯ ಖತೀಬ್ ಮುೌಲಾನಾ ಸಫ್ವಾನ್ ಜೌಹರಿ ಉದ್ಘಾಟಿಸಿ ಶುಭ ಹಾರೈಸಿದರು.

​ಗಣ್ಯರ ಉಪಸ್ಥಿತಿ ಹಾಗೂ ಸೌಹಾರ್ದ ಸಂದೇಶ:
ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಿ ಸೌಹಾರ್ದತೆಯ ಸಂದೇಶ ಸಾರಿದರು. ಎಂ.ಜೆ.ಎಂ. ಮಸೀದಿ ಉಜಿರೆಯ ಅಧ್ಯಕ್ಷ ಅಬೂಬಕರ್, ಮುಂಡಾಜೆ ಪರಶುರಾಮ ದೇವಸ್ಥಾನದ ಟ್ರಸ್ಟಿ ಅರೆಕಲ್ ರಾಮಚಂದ್ರ ಭಟ್, ಉಜಿರೆ ಸಂತ ಅಂತೋನಿ ಚರ್ಚ್‌ನ ಪಾಲನಾ ಮಂಡಳಿಯ ಮಾಜಿ ಉಪಾಧ್ಯಕ್ಷ ವೇಲೇರಿಯನ್ ರೋಡ್ರಿಗಸ್, ಕಾಶಿಬೆಟ್ಟು ಶನೀಶ್ವರ ದೇವಸ್ಥಾನದ ಧರ್ಮದರ್ಶಿ ಜನಾರ್ದನ ಆಚಾರ್ಯ ಹಾಗೂ ಬೆಳ್ತಂಗಡಿ ಝೋನ್ ಕೆ.ಎಂ.ಜೆ. ಅಧ್ಯಕ್ಷ ಎಸ್.ಎಂ. ಕೋಯ ತಂಙಳ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಹುಸೇನ್ ಕೋಯ ತಂಙಳ್ ಕುಂಟಿನಿ, ಕೆ.ಎಂ.ಜೆ. ಉಜಿರೆ ಸರ್ಕಲ್ ಕೋಶಾಧಿಕಾರಿ ಜನಾಬ್ ಹಂಝ ಮಾಚಾರ್, ಉಪಾಧ್ಯಕ್ಷ ಮಯ್ಯದ್ದಿ ಉಪಸ್ಥಿತರಿದ್ದರು. ಎಲ್ಲಾ ಮುಖ್ಯ ಅತಿಥಿಗಳನ್ನು ಶಾಲು ಹೊದೆಸಿ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.
ಸರ್ಕಲ್ ವ್ಯಾಪ್ತಿಗೊಳಪಟ್ಟ ಉಜಿರೆ, ಅತ್ತಾಜೆ, ಕಕ್ಕೆನಾ, ಗಾಂಧಿನಗರ, ನಿಡಿಗಲ್, ಕನ್ಯಾಡಿ, ಮಾಚಾರ್ ಮತ್ತು ಬೆಳಾಲ್ ಯೂನಿಟ್ಟುಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಕೆ.ಎಂ.ಜೆ. ಉಜಿರೆ ಸರ್ಕಲ್ ಉಪಾಧ್ಯಕ್ಷ ಹಾಜಿ ಉಮರ್‌ಕುಂಞಿ ನಾಡ್ಜೆ ಸ್ವಾಗತಿಸಿದರು. ಕೊನೆಯಲ್ಲಿ ಕೆ.ಎಂ.ಜೆ. ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ವಂದನಾರ್ಪಣೆಗೈದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!