31.4 C
ಪುತ್ತೂರು, ಬೆಳ್ತಂಗಡಿ
September 20, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ತುಳು ಭಾಷೆಗೆ ಎರಡನೇ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸ್ವಾಗತ: ಡಾ.ಎಂ.ಪಿ.ಶ್ರೀನಾಥ

ಬೆಳ್ತಂಗಡಿ: ತುಳು ಭಾಷೆಯನ್ನು ಕರ್ನಾಟಕದ ಎರಡನೆಯ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರು ಹಾರ್ದಿಕವಾಗಿ ಸ್ವಾಗತಿಸಿದ್ದಾರೆ.

ತುಳುನಾಡಿನ ಜನತೆಯ ದಶಕಗಳ ಕನಸು ಮತ್ತು ನಿರಂತರ ಹೋರಾಟಕ್ಕೆ ಕೊನೆಗೂ ಸೂಕ್ತ ಗೌರವ ಸಿಕ್ಕಂತಾಗಿದೆ. ತುಳುವರು ಇಂದು ಉದ್ಯೋಗ ಹಾಗೂ ವಿವಿಧ ಕಾರಣಗಳಿಗಾಗಿ ಜಗತ್ತಿನಾದ್ಯಂತ ಪಸರಿಸಿದ್ದು, ತಮ್ಮ ವಿಶಿಷ್ಟ ಭಾಷೆ ಮತ್ತು ಸಮೃದ್ಧ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ತುಳು ಭಾಷಿಕರು ಅತ್ಯಂತ ಉದಾರ ಮತ್ತು ಹೃದಯವಂತ ಮನಸ್ಸಿನವರಾಗಿದ್ದು, ತಮ್ಮ ಮಾತೃಭಾಷೆ ತುಳುವಿನೊಂದಿಗೆ ಕನ್ನಡ ಸಾಹಿತ್ಯ, ಕಲೆ ಹಾಗೂ ಸಾಂಸ್ಕೃತಿಕ ರಂಗಕ್ಕೂ ಅನಾದಿ ಕಾಲದಿಂದಲೂ ಅಪಾರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಕನ್ನಡ ಮತ್ತು ತುಳು ಭಾಷೆಗಳ ನಡುವೆ ನಿಕಟ ಹಾಗೂ ಸಾಮರಸ್ಯದ ಬಾಂಧವ್ಯವಿದೆ. ಈ ಎಲ್ಲಾ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಪರಿಗಣಿಸಿ, ಸರ್ಕಾರವು ತುಳು ಭಾಷೆಗೆ ಎರಡನೇ ಅಧಿಕೃತ ರಾಜ್ಯಭಾಷೆಯ ಸ್ಥಾನಮಾನ ನೀಡಿರುವುದು ಅತ್ಯಂತ ಶ್ಲಾಘನೀಯ ಹಾಗೂ ಚಾರಿತ್ರಿಕ ಹೆಜ್ಜೆಯಾಗಿದೆ.
ಈ ಐತಿಹಾಸಿಕ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರಕ್ಕೆ ಹಾಗೂ ಈ ಹೋರಾಟದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
error: Content is protected !!