
ಬೆಳ್ತಂಗಡಿ : ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ. ಅಧ್ಯಕ್ಷತೆಯಲ್ಲಿ ಸೆ. 20 ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ವರದಿ ಸಾಲಿನಲ್ಲಿ 456.09 ಕೋಟಿ ರೂ. ವ್ಯಾಪಾರ ವಾಹಿವಾಟು ನಡೆಸಿ ರೂ. 2,04 ಕೋಟಿ ಲಾಭ ಗಳಿಸಿ ಸದಸ್ಯರಿಗೆ ಶೇ. 20 ರಷ್ಟು ಡಿವಿಡೆಂಡು ನೀಡಲಾಗುವುದು ಎಂದು ತಿಳಿಸಿದರು.
ಬ್ಯಾಂಕಿನ ಹಿರಿಯ ಸದಸ್ಯರಿಗೆ ಪಿಯುಸಿ ಮತ್ತು ಎಸ್ಎ ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಿರ್ದೇಶಕರಾದ ರಾಮ್ ದಾಸ್ ನಾಯಕ್, ಸಂದೀಪ್ ಹೆಗ್ಡೆ, ಎಂ. ಆರ್. ಸಂತೋಷ್, ನಾಗಪ್ಪ, ಆಶಾ, ರೋಹಿಣಿ, ಕೃಷ್ಣಪ್ಪ ಮೂಲ್ಯ, ಪ್ರಶಾಂತ್, ರಾಜು ನಾಯ್ಕ ಹಾಗೂ ಪ್ರವೀಣ ಮತ್ತು ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವರದಿ ವಾಚಿಸಿದರು. ಉಪಾಧ್ಯಕ್ಷ ರತ್ನಾಕರ ಬಿ. ವಂದಿಸಿದರು.











