September 20, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವೇಣೂರು: ಶಾಸಕ ಹರೀಶ್ ಪೂಂಜರಿಂದ ಕಾಂಕ್ರಿಟ್ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ- ಸಾರ್ವಜನಿಕ ರಿಕ್ಷಾ ತಂಗುದಾಣ ಉದ್ಘಾಟನೆ

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ ವಿಶೇಷ ಅನುದಾನಗಳಡಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇಂದು ನೆರವೇರಿಸಿದರು.

ವೇಣೂರು ಸ್ವಸ್ತಿಕ ನಗರದಲ್ಲಿ ರೂ. ೨.೩೦ ಲಕ್ಷ ಮತ್ತು ಬಜಿರೆ ಗ್ರಾಮದ ಮುದ್ದಾಡಿ ಬಳಿ ರೂ. ೧.೭೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರಿಟ್ ರಸ್ತೆಗೆ ಶಿಲಾನ್ಯಾಸ ಮತ್ತು ಬಜಿರೆಯ ಮುದ್ದಾಡಿಯಲ್ಲಿ ರೂ. ೧.೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಾರ್ವಜನಿಕ ರಿಕ್ಷಾ ತಂಗುದಾಣದ ಉದ್ಘಾಟನೆಯನ್ನು ಶಾಸಕರು ನೆರವೇರಿಸಿದರು.

ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ಸುರೇಶ್ ಆರಿಗ ಪೆರ್ಮಾಣುಗುತ್ತು, ಉದ್ಯಮಿ ಕೆ. ಭಾಸ್ಕರ ಪೈ, ತಾ.ಪಂ. ಮಾಜಿ ಸದಸ್ಯ ಕೆ. ವಿಜಯ ಗೌಡ, ನ್ಯಾಯವಾದಿ ಸಹನಾ ಕುಂದರ್ ಸೂಡಾ ಗುಂಡೂರಿ, ಪಂಚಾಯತು ಸದಸ್ಯರಾದ ಸುನಿಲ್ ಕುಮಾರ್, ಸುಜಾತ, ಲೀಲಾವತಿ, ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾದ ವಸಂತ ಮಡಿವಾಳ ಅಂಡಿಂಜೆ, ಪ್ರಮುಖರಾದ ಶಶಿಕುಮಾರ್ ಇಂದ್ರ, ಶ್ರೀಮತಿ ರೂಪಾ ಚಂದನ ಸೇರಿದಂತೆ ಊರಿನ ಹಲವು ಮಂದಿ ಗಣ್ಯರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯರಾಗಿರುವ ಅರುಣ್ ಕ್ರಾಸ್ತ ಅವರು ಸ್ವಾಗತಿಸಿದರು.

Related posts

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya
error: Content is protected !!