27.8 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಮುಂಡತ್ತೋಡಿ ಶಾರದಾ ಇವರ ಗದ್ದೆಯಲ್ಲಿ ಕೆಸರಡೊಂಜಿ ದಿನ ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟವನ್ನು ಉಜಿರೆ ವರ್ತಕರ ಸಂಘದ ಅಧ್ಯಕ್ಷರಾದ ಪ್ರಸಾದ್ ಬಿ.ಎಸ್. ಗದ್ದೆಗೆ ಪೂಜೆ ಮಾಡಿ ಹಾಲು ಹಾಕಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ತುಳುನಾಡಿನ ಸಾಂಸ್ಕೃತಿಕ ಪರಂಪರೆಯಲ್ಲಿ ಗದ್ದೆಗೆ ಪವಿತ್ರವಾದ ಸ್ಥಾನವಿದೆ. ವಿದ್ಯಾರ್ಥಿಗಳಿಗೆ ಈ ಮಣ್ಣಿನ ಸೊಗಡು ಮತ್ತು ಸಂಸ್ಕೃತಿ ತಿಳಿಸುವ ಇಂತಹ ಕ್ರೀಡಾ ಕೂಟವನ್ನು ಎನ್ ಎಸ್ ಎಸ್ ಘಟಕ ಆಯೋಜನೆ ಮಾಡಿರುವುದು ಅರ್ಥಪೂರ್ಣವಾದುದು” ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ “ನಮ್ಮ ತುಳುನಾಡ ಸಂಸ್ಕೃತಿಯನ್ನು ಉಳಿಸುವಲ್ಲಿ ಕೆಸರುಡೊಂಜಿ ದಿನ ಕ್ರೀಡಾಕೂಟವು ಬಹಳ ಮಹತ್ತರವಾದುದು. ಬದಲಾಗುತ್ತಿರುವ ಯುವ ಜನಾಂಗಕ್ಕೆ ಇಂತಹ ಕ್ರೀಡಾಕೂಟಗಳ ಮೂಲಕ ನಮ್ಮ ಸಂಸ್ಕೃತಿಯ ಅರಿವು ಮೂಡಿಸಲು ಸಾಧ್ಯ”ಎಂದು ಹೇಳಿದರು.

ಗದ್ದೆಯ ಮಾಲಕಿ ಶಾರದಾರವರ ಮಗಳು ಪೂಜಾ ದೇವರಾಜ್ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ದೇವರಾಜ್ ಪೂಜಾರಿ, ಸ್ಥಳೀಯರಾದ ಪವಿತ್ರ, ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಭಿಜ್ಞಾ, ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು.
ಸ್ವಯಂ ಸೇವಕರಿಗೆ ಕೆಸರು ಗದ್ದೆ ಓಟ, ಹಾಳೆ ಓಟ, ವಾಲಿಬಾಲ್, ಥ್ರೋ ಬಾಲ್, ಕಂಬ ಸುತ್ತುವ ಓಟ, ಹಗ್ಗ ಜಗ್ಗಾಟ, ನಿಧಿ ಶೋಧ ಮುಂತಾದ ಸ್ಪರ್ಧೆಗಳನ್ನು ನಡೆಸಲಾಯಿತು.

ಸ್ವಯಂ ಸೇವಕಿ ರಕ್ಷಿತಾ ಕಾರ್ಯಕ್ರಮ ನಿರೂಪಿಸಿ, ಸುಪೇಕ್ಷಾ ಸ್ವಾಗತಿಸಿ, ಶ್ರೇಯಸ್ ವಂದಿಸಿದರು.

Related posts

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya
error: Content is protected !!