
ಬೆಳ್ತಂಗಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಸೆ.20ರಂದು ಸಂಘದ ವಠಾರದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಸಹಕಾರಿ ರತ್ನ ಸತೀಶ್ ಕಾಶಿಪಟ್ಣ ವರದಿ ಸಾಲಿನಲ್ಲಿ 4.26 ಕೋಟಿ ರೂ. ವ್ಯವಹಾರ ನಡೆಸಿ ರೂ. 1.06 ಕೋಟಿ ಲಾಭ ಗಳಿಸಿದೆ ಎಂದರು.
ಸಹಕಾರಿ ರಂಗದಲ್ಲಿ ಗಣಣೀಯ ಸಾಧನೆಗೖದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತಗೊಂಡ ಸತೀಶ್ ಕಾಶಿಪಟ್ನ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ ನಿರ್ದೇಶಕರಾದ ಎನ್. ಆರ್. ಸೀತಾರಾಮ ರೈ, ಪ್ರವೀಣ್ ಗಿಲ್ಬರ್ಟ್ ಪಿಂಟೋ, ದೇವಕಿ ಡಿ. ಶೆಟ್ಟಿ, ಸುಜಾತಾ, ಕೃಷ್ಣಪ್ಪ, ರಾಜೇಶ್ ಎನ್. ಶೆಟ್ಟಿ, ಸುರೇಶ್ ಅಂಚನ್, ಅಕ್ಷಯ ಕುಮಾರ್, ವಿಜಯ ನಾಯ್ಕ, ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಹೇಮಾ ವರದಿ ವಾಚಿಸಿದರು. ಸಿಬ್ಬಂದಿಗಳು ಸಹಕರಿಸಿದರು.











