32 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ – ರಕ್ಷಕ–ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್,ಉಪಾಧ್ಯಕ್ಷರಾಗಿ ಸವಿತಾ ರಮೇಶ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026–27ನೇ ಸಾಲಿನ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ ಸೆ.19ರಂದು ನಡೆಯಿತು.

ಸಭೆಗೆ ಲೊರೆಟೊ ಸೆಂಟ್ರಲ್ ಸ್ಕೂಲ್, ಬಂಟ್ವಾಳದ ಪ್ರಾಂಶುಪಾಲರಾದ ವಂದನೀಯ ಧರ್ಮಗುರು ಫಾದರ್ ಜೈಸನ್ ವಿಜಯ್ ಮೋನಿಸ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅವರು ಮಕ್ಕಳ ಶಿಕ್ಷಣ, ವ್ಯಕ್ತಿತ್ವ ವಿಕಸನ, ಬೆಳವಣಿಗೆ ಹಾಗೂ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರದ ಕುರಿತು ಪೋಷಕರಿಗೆ ಅಗತ್ಯವಾದ ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ 2026–27ನೇ ಸಾಲಿನ ರಕ್ಷಕ–ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಅಭಿನಂದನ್ ಎಚ್. ಹಾಗೂ ಉಪಾಧ್ಯಕ್ಷರಾಗಿ ಸವಿತಾ ರಮೇಶ್ ಶೆಟ್ಟಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ರೆವ. ಸಿಸ್ಟರ್ ಪ್ರೀತಿ ಜಾರ್ಜ್, ಶಾಲಾ ಸಂಚಾಲಕಿ ರೆವ. ಸಿಸ್ಟರ್ ಎಲ್ಸಿ ಪ್ಯಾಲೆಟ್, ರಕ್ಷಕ–ಶಿಕ್ಷಕರ ಸಮಿತಿಯ ಮಾಜಿ ಅಧ್ಯಕ್ಷ ರೆಜಿ ಜಾರ್ಜ್, ಉಪಾಧ್ಯಕ್ಷೆ ಸುಮಿತ ಫೆರ್ನಾಂಡಿಸ್, ಶಾಲಾ ಸಿಬ್ಬಂದಿ ಕಾರ್ಯದರ್ಶಿ ಲಾವಣ್ಯ, ಪೋಷಕರು ಹಾಗೂ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ರೆವ. ಸಿಸ್ಟರ್ ಪ್ರೀತಿ ಜಾರ್ಜ್ ಗಣ್ಯರನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಪ್ರಮೀಳಾ ಶೆಟ್ಟಿ ವಂದಿಸಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya
error: Content is protected !!