ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ
ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ದೇವಣ್ಣ ಗೌಡರ ಪುತ್ರ ಲೋಲಾಕ್ಷ ಎಂಬವರು ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ ಪಂಚಾಂಗವನ್ನು ಅರಣ್ಯಾಧಿಕಾರಿಗಳು ಕಿತ್ತೆಸೆದುದನ್ನು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ...
